ಭೂಮಿ ಮತ್ತು ಜೀವ ಸಂಕುಲದ ಸಂರಕ್ಷಣೆಯತ್ತ ಗಮನಹರಿಸಿ : ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಸಲಹೆ
ಮಡಿಕೇರಿ ಏ.೨೭ : ಭೂಮಿ ಪ್ರಾಕೃತಿಕ ಸಂಪತ್ತಾಗಿದ್ದು, ಭೂಮಿ ಇಲ್ಲದೆ ಮಾನವನ ಬದುಕು ಊಹಿಸುವುದು ಅಸಾಧ್ಯ. ಆದ್ದರಿಂದ ಭೂಮಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಿವಿಲ್ ನ್ಯಾಯಾಧೀಶರಾದ ಬಿ.ಕೆ.ಮನು ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಅರಣ್ಯ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ’ವಿಶ್ವ ಭೂಮಿ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾನವನ ಅತೀ ಆಸೆಯಿಂದ ಜೀವ ಸಂಕುಲ ಅವನತಿಯತ್ತ ಸಾಗುತ್ತಿದೆ. ಹಾಗೆಯೇ ಪರಿಸರ ಮಾಲಿನ್ಯ ಉಂಟಾಗುತ್ತದೆ. ಇದನ್ನು ತಡೆಯಬೇಕು. ಭೂಮಿಯ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್. ಮಂಜುನಾಥ್ ಅವರು ಮಾತನಾಡಿ ನಮ್ಮ ಮನೆಯಂತೆ ಭೂಮಿಯನ್ನು ಸಂರಕ್ಷಣೆ ಮಾಡಬೇಕು. ಪ್ಲಾಸ್ಟಿಕ್ನ್ನು ಮರು ಬಳಕೆ ಮಾಡುವುದು ಕಷ್ಟಸಾಧ್ಯ. ಆದ್ದರಿಂದ ಪ್ಲಾಸ್ಟಿಕ್ನ್ನು ಉಪಯೋಗಿಸಲೇಬಾರದು. ಜೀವ ಸಂಕುಲ ಉಳಿಯಲು ಭೂಮಿ ಉಳಿಸಬೇಕು ಎಂದರು.
ಜಲ ಮಾಲಿನ್ಯ, ವಾಯು ಮಾಲಿನ್ಯದಿಂದ ಅನೇಕ ಜೀವ ಸಂಕುಲಕ್ಕೆ ತೊಂದರೆ ಸಿಲುಕುತ್ತವೆ. ಇದನ್ನು ತಪ್ಪಿಸಬೇಕು. ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆ ಇರಬೇಕು. ರಾಷ್ಟ್ರದ ಪಶ್ಚಿಮಘಟ್ಟ ಇಡೀ ವಿಶ್ವದಲ್ಲಿಯೇ ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಪ್ರದೇಶವಾಗಿದೆ ಎಂದರು.
ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಯಾವುದೇ ರೀತಿಯ ಬೆಂಕಿ ಬೀಳದಂತೆ ನೋಡಿಕೊಂಡರೆ ಇನ್ನು ಮೂರು ವರ್ಷದಲ್ಲಿ ಉತ್ತಮ ಅರಣ್ಯ ಕಾಣಬಹುದು ಎಂದು ಅವರು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋವರ್ಧನ್ ಸಿಂಗ್ ಅವರು ಮಾತನಾಡಿ ಪ್ರಾಕೃತಿಕ ಸಂಪತ್ತನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಭೂಮಿ ತಾಯಿಯಂತೆ. ಭೂಮಿ ಎಲ್ಲವನ್ನು ನೀಡಿದೆ. ಅದನ್ನು ಸಂರಕ್ಷಣೆ ಮಾಡಬೇಕು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಭೂಮಿ ಸಂರಕ್ಷಣೆ ಬಗ್ಗೆ ಪ್ರತಿನಿತ್ಯ ಜಾಗೃತಿ ವಹಿಸಬೇಕು. ಮಾನವನ ದುರಾಸೆಯಿಂದ ವಿಶ್ವದಲ್ಲಿ ೧೦ ಲಕ್ಷ ಜೀವ ಪ್ರಬೇಧಗಳು ವಿನಾಶದ ಅಂಚಿನಲ್ಲಿವೆ ಎಂದು ಅವರು ತಿಳಿಸಿದರು.
ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕರಾದ ಟಿ.ಜಿ.ಪ್ರೇಮಕುಮಾರ್ ಅವರು ಮಾತನಾಡಿ ಇಡೀ ವಿಶ್ವದಲ್ಲಿ ಪಶ್ಚಿಮಘಟ್ಟ ಪ್ರದೇಶವು ೧೨ ನೇ ಸ್ಥಾನ. ಹಾಗೂ ದೇಶದಲ್ಲಿ ಎರಡನೇ ಸ್ಥಾನ ಹೊಂದಿದೆ. ಆದ್ದರಿಂದ ಪಶ್ಚಿಮಘಟ್ಟ ಪ್ರದೇಶ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಅವರು ಹೇಳಿದರು.
’ಇರುವುದೊಂದೇ ಭೂಮಿ. ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಣೆ ಮಾಡಬೇಕು. ಆದ್ದರಿಂದ ಭೂಮಿಯನ್ನು ಕಸದ ತೊಟ್ಟಿ ಮಾಡದೆ, ಕಲ್ಪವೃಕ್ಷ ಮಾಡಬೇಕು ಎಂದರು.’
ಜಿಲ್ಲೆಯ ಬಯಲು ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ವಿವಿಧ ಇಲಾಖೆಗಳು ಸಹಕರಿಸಬೇಕಾಗಿ ಪ್ರೇಮ ಕುಮಾರ್ ಅವರು ಕೋರಿದರು.
ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಪರಿಸರ ಸ್ನೇಹಿ ಪ್ರವಾಸಿ ತಾಣಗಳನ್ನಾಗಿ ನಿರ್ಮಾಣ ಮಾಡಬೇಕು. ಹಸಿ ಮತ್ತು ಒಣ ಕಸ ಬೇರ್ಪಡಿಸಬೇಕು. ಮಳೆ ನೀರು ಸಂಗ್ರಹಣೆಗೆ ಒತ್ತು ನೀಡಬೇಕು ಎಂದರು.
ಪರಿಸರ ಜಾಗೃತಿ ಆಂದೋಲನದ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್ ಅವರು ಮಾತನಾಡಿ ಪಶ್ಚಿಮ ಘಟ್ಟ ಪ್ರದೇಶವು ಸುಮಾರು ೧೬೦೦ ಕಿ.ಮೀ. ಉದ್ದ ಹಾಗೂ ೧.೬೦ ಲಕ್ಷ ಚದರ ಕಿ.ಮೀ. ವ್ಯಾಪ್ತಿಯನ್ನು ಆವರಿಸಿದೆ. ಇದನ್ನು ಸಂರಕ್ಷಣೆ ಮಾಡಬೇಕು ಎಂದು ಅವರು ಹೇಳಿದರು.
ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಕೃತಿ ಸಂಪನ್ಮೂಲವನ್ನು ಸಂರಕ್ಷಣೆ ಮಾಡಬೇಕು. ಜೀವರಾಶಿಗಳನ್ನು ಉಳಿಸಬೇಕು. ಪ್ರತಿಯೊಬ್ಬ ಮನುಷ್ಯನ ಬದುಕು ಭೂಮಿಯೊಂದಿಗೆ ಹಾಸು ಹೊಕ್ಕಾಗಿದೆ. ಭೂಮಿಯಿಲ್ಲದೆ ಬದುಕು ನಿರರ್ಥಕ ಎಂದು ಅರಿತುಕೊಳ್ಳಬೇಕು ಎಂದರು.
ಪ್ರಕೃತಿಯಲ್ಲಿ ಏಕಾಂಗಿ ಎಂಬುದೇ ಇಲ್ಲ. ಪ್ರತಿಯೊಂದು ಜೀವಿಗೂ ಜೀವಿಸುವ ಸಮಾನ ಹಕ್ಕಿದೆ. ಜೀವಿಗಳಿಗಿರುವ ಏಕೈಕ ಗ್ರಹವಾದ ಭೂಮಿಯೇ ನಮ್ಮ ಮನೆ ಎಂದರು.
ವಿಶ್ವ ಭೂಮಿ ದಿನಾಚರಣೆಯ ಸಂದೇಶದ ಪ್ರತಿಜ್ಞಾ ವಿಧಿಯನ್ನು ಟಿ.ಜಿ.ಪ್ರೇಮಕುಮಾರ್ ಅವರು ಭೋದಿಸಿದರು. ಇದೇ ಸಂದರ್ಭದಲ್ಲಿ ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊರತಂದಿರುವ ಕರಪತ್ರ ಬಿಡುಗಡೆ ಮಾಡಲಾಯಿತು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಿಣ್ಣಪ್ಪ, ನೆಹರು, ದಯಾನಂದ, ಸೀಮಾ, ವಲಯ ಅರಣ್ಯಾಧಿಕಾರಿ ಜಗದೀಶ್ ಇತರರು ಹಾಜರಿದ್ದರು.
ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎ.ಜಯಪ್ಪ ನಿರೂಪಿಸಿದರು. ಶಿಕ್ಷಕರಾದ ಸಿ.ಎ.ಸುರೇಶ್ ಸ್ವಾಗತಿಸಿದರು. ಶಿಕ್ಷಕಿಯರಾದ ಮಾಲಾದೇವಿ ಮತ್ತು ಎಚ್.ಎಂ.ಭಾರತಿ ಅವರು ಪರಿಸರ ಗೀತೆ ಹಾಡಿದರು. ಎಂ.ಇ.ಮೊಹಿದ್ದೀನ್ ವಂದಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮಾಲಿನ್ಯ ತಡೆಯೋಣ ಪರಿಸರ ಸಂರಕ್ಷಿಸೋಣ, ಜಾಗತಿಕ ತಾಪಮಾನ ತಗ್ಗಿಸಿ ಭೂಮಿಯನ್ನು ಸಂರಕ್ಷಿಸಿ, ಉರಿಯವ ಭೂಮಿಯನ್ನು ತಂಪಾಗಿಸೋಣ ಬನ್ನಿ, ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ, ಪ್ಲಾಸ್ಟಿಕ್ ತ್ಯಜಿಸಿ ಮಾಲಿನ್ಯ ತಡೆಗಟ್ಟಿ, ಹಸಿರೇ ಉಸಿರು-ಜಲವೇ ಜೀವಜಲ, ಕುಡಿಯಿರಿ ಶುದ್ಧಜಲ ಉಳಿಸಿರಿ. ಅಂತರ್ಜಲ, ಜೀವ ಸಂಕುಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮನೆಗೊಂದು ಮರ ಊರಿಗೊಂದು ವನ, ಸ್ವಚ್ಛ ಗ್ರಾಮ ಆರೋಗ್ಯಧಾಮ, ಜೈವಿಕ ಇಂಧನ ಭವಿಷ್ಯದ ಇಂಧನ, ಬೈಸಿಕಲ್ ಬಳಸಿ ಇಂಧನ ಉಳಿಸಿ, ಬೈಸಿಕಲ್ ಬಳಸಿ ಪರಿಸರ ಸಂರಕ್ಷಿಸಿ ಎಂಬ ಘೋಷ ವಾಕ್ಯಗಳು ಮೊಳಗಿದವು. ಸಭಾ ಕಾರ್ಯಕ್ರಮದ ಮೊದಲು ಅರಣ್ಯ ಭವನದ ಆವರಣದಲ್ಲಿ ಗಿಡ ನೆಡಲಾಯಿತು.
ಮಡಿಕೇರಿ ಏ.೨೭ : ಭೂಮಿ ಪ್ರಾಕೃತಿಕ ಸಂಪತ್ತಾಗಿದ್ದು, ಭೂಮಿ ಇಲ್ಲದೆ ಮಾನವನ ಬದುಕು ಊಹಿಸುವುದು ಅಸಾಧ್ಯ. ಆದ್ದರಿಂದ ಭೂಮಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಿವಿಲ್ ನ್ಯಾಯಾಧೀಶರಾದ ಬಿ.ಕೆ.ಮನು ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಅರಣ್ಯ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ’ವಿಶ್ವ ಭೂಮಿ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾನವನ ಅತೀ ಆಸೆಯಿಂದ ಜೀವ ಸಂಕುಲ ಅವನತಿಯತ್ತ ಸಾಗುತ್ತಿದೆ. ಹಾಗೆಯೇ ಪರಿಸರ ಮಾಲಿನ್ಯ ಉಂಟಾಗುತ್ತದೆ. ಇದನ್ನು ತಡೆಯಬೇಕು. ಭೂಮಿಯ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್. ಮಂಜುನಾಥ್ ಅವರು ಮಾತನಾಡಿ ನಮ್ಮ ಮನೆಯಂತೆ ಭೂಮಿಯನ್ನು ಸಂರಕ್ಷಣೆ ಮಾಡಬೇಕು. ಪ್ಲಾಸ್ಟಿಕ್ನ್ನು ಮರು ಬಳಕೆ ಮಾಡುವುದು ಕಷ್ಟಸಾಧ್ಯ. ಆದ್ದರಿಂದ ಪ್ಲಾಸ್ಟಿಕ್ನ್ನು ಉಪಯೋಗಿಸಲೇಬಾರದು. ಜೀವ ಸಂಕುಲ ಉಳಿಯಲು ಭೂಮಿ ಉಳಿಸಬೇಕು ಎಂದರು.
ಜಲ ಮಾಲಿನ್ಯ, ವಾಯು ಮಾಲಿನ್ಯದಿಂದ ಅನೇಕ ಜೀವ ಸಂಕುಲಕ್ಕೆ ತೊಂದರೆ ಸಿಲುಕುತ್ತವೆ. ಇದನ್ನು ತಪ್ಪಿಸಬೇಕು. ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆ ಇರಬೇಕು. ರಾಷ್ಟ್ರದ ಪಶ್ಚಿಮಘಟ್ಟ ಇಡೀ ವಿಶ್ವದಲ್ಲಿಯೇ ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಪ್ರದೇಶವಾಗಿದೆ ಎಂದರು.
ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಯಾವುದೇ ರೀತಿಯ ಬೆಂಕಿ ಬೀಳದಂತೆ ನೋಡಿಕೊಂಡರೆ ಇನ್ನು ಮೂರು ವರ್ಷದಲ್ಲಿ ಉತ್ತಮ ಅರಣ್ಯ ಕಾಣಬಹುದು ಎಂದು ಅವರು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋವರ್ಧನ್ ಸಿಂಗ್ ಅವರು ಮಾತನಾಡಿ ಪ್ರಾಕೃತಿಕ ಸಂಪತ್ತನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಭೂಮಿ ತಾಯಿಯಂತೆ. ಭೂಮಿ ಎಲ್ಲವನ್ನು ನೀಡಿದೆ. ಅದನ್ನು ಸಂರಕ್ಷಣೆ ಮಾಡಬೇಕು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಭೂಮಿ ಸಂರಕ್ಷಣೆ ಬಗ್ಗೆ ಪ್ರತಿನಿತ್ಯ ಜಾಗೃತಿ ವಹಿಸಬೇಕು. ಮಾನವನ ದುರಾಸೆಯಿಂದ ವಿಶ್ವದಲ್ಲಿ ೧೦ ಲಕ್ಷ ಜೀವ ಪ್ರಬೇಧಗಳು ವಿನಾಶದ ಅಂಚಿನಲ್ಲಿವೆ ಎಂದು ಅವರು ತಿಳಿಸಿದರು.
ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕರಾದ ಟಿ.ಜಿ.ಪ್ರೇಮಕುಮಾರ್ ಅವರು ಮಾತನಾಡಿ ಇಡೀ ವಿಶ್ವದಲ್ಲಿ ಪಶ್ಚಿಮಘಟ್ಟ ಪ್ರದೇಶವು ೧೨ ನೇ ಸ್ಥಾನ. ಹಾಗೂ ದೇಶದಲ್ಲಿ ಎರಡನೇ ಸ್ಥಾನ ಹೊಂದಿದೆ. ಆದ್ದರಿಂದ ಪಶ್ಚಿಮಘಟ್ಟ ಪ್ರದೇಶ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಅವರು ಹೇಳಿದರು.
’ಇರುವುದೊಂದೇ ಭೂಮಿ. ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಣೆ ಮಾಡಬೇಕು. ಆದ್ದರಿಂದ ಭೂಮಿಯನ್ನು ಕಸದ ತೊಟ್ಟಿ ಮಾಡದೆ, ಕಲ್ಪವೃಕ್ಷ ಮಾಡಬೇಕು ಎಂದರು.’
ಜಿಲ್ಲೆಯ ಬಯಲು ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ವಿವಿಧ ಇಲಾಖೆಗಳು ಸಹಕರಿಸಬೇಕಾಗಿ ಪ್ರೇಮ ಕುಮಾರ್ ಅವರು ಕೋರಿದರು.
ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಪರಿಸರ ಸ್ನೇಹಿ ಪ್ರವಾಸಿ ತಾಣಗಳನ್ನಾಗಿ ನಿರ್ಮಾಣ ಮಾಡಬೇಕು. ಹಸಿ ಮತ್ತು ಒಣ ಕಸ ಬೇರ್ಪಡಿಸಬೇಕು. ಮಳೆ ನೀರು ಸಂಗ್ರಹಣೆಗೆ ಒತ್ತು ನೀಡಬೇಕು ಎಂದರು.
ಪರಿಸರ ಜಾಗೃತಿ ಆಂದೋಲನದ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್ ಅವರು ಮಾತನಾಡಿ ಪಶ್ಚಿಮ ಘಟ್ಟ ಪ್ರದೇಶವು ಸುಮಾರು ೧೬೦೦ ಕಿ.ಮೀ. ಉದ್ದ ಹಾಗೂ ೧.೬೦ ಲಕ್ಷ ಚದರ ಕಿ.ಮೀ. ವ್ಯಾಪ್ತಿಯನ್ನು ಆವರಿಸಿದೆ. ಇದನ್ನು ಸಂರಕ್ಷಣೆ ಮಾಡಬೇಕು ಎಂದು ಅವರು ಹೇಳಿದರು.
ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಕೃತಿ ಸಂಪನ್ಮೂಲವನ್ನು ಸಂರಕ್ಷಣೆ ಮಾಡಬೇಕು. ಜೀವರಾಶಿಗಳನ್ನು ಉಳಿಸಬೇಕು. ಪ್ರತಿಯೊಬ್ಬ ಮನುಷ್ಯನ ಬದುಕು ಭೂಮಿಯೊಂದಿಗೆ ಹಾಸು ಹೊಕ್ಕಾಗಿದೆ. ಭೂಮಿಯಿಲ್ಲದೆ ಬದುಕು ನಿರರ್ಥಕ ಎಂದು ಅರಿತುಕೊಳ್ಳಬೇಕು ಎಂದರು.
ಪ್ರಕೃತಿಯಲ್ಲಿ ಏಕಾಂಗಿ ಎಂಬುದೇ ಇಲ್ಲ. ಪ್ರತಿಯೊಂದು ಜೀವಿಗೂ ಜೀವಿಸುವ ಸಮಾನ ಹಕ್ಕಿದೆ. ಜೀವಿಗಳಿಗಿರುವ ಏಕೈಕ ಗ್ರಹವಾದ ಭೂಮಿಯೇ ನಮ್ಮ ಮನೆ ಎಂದರು.
ವಿಶ್ವ ಭೂಮಿ ದಿನಾಚರಣೆಯ ಸಂದೇಶದ ಪ್ರತಿಜ್ಞಾ ವಿಧಿಯನ್ನು ಟಿ.ಜಿ.ಪ್ರೇಮಕುಮಾರ್ ಅವರು ಭೋದಿಸಿದರು. ಇದೇ ಸಂದರ್ಭದಲ್ಲಿ ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊರತಂದಿರುವ ಕರಪತ್ರ ಬಿಡುಗಡೆ ಮಾಡಲಾಯಿತು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಿಣ್ಣಪ್ಪ, ನೆಹರು, ದಯಾನಂದ, ಸೀಮಾ, ವಲಯ ಅರಣ್ಯಾಧಿಕಾರಿ ಜಗದೀಶ್ ಇತರರು ಹಾಜರಿದ್ದರು.
ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎ.ಜಯಪ್ಪ ನಿರೂಪಿಸಿದರು. ಶಿಕ್ಷಕರಾದ ಸಿ.ಎ.ಸುರೇಶ್ ಸ್ವಾಗತಿಸಿದರು. ಶಿಕ್ಷಕಿಯರಾದ ಮಾಲಾದೇವಿ ಮತ್ತು ಎಚ್.ಎಂ.ಭಾರತಿ ಅವರು ಪರಿಸರ ಗೀತೆ ಹಾಡಿದರು. ಎಂ.ಇ.ಮೊಹಿದ್ದೀನ್ ವಂದಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮಾಲಿನ್ಯ ತಡೆಯೋಣ ಪರಿಸರ ಸಂರಕ್ಷಿಸೋಣ, ಜಾಗತಿಕ ತಾಪಮಾನ ತಗ್ಗಿಸಿ ಭೂಮಿಯನ್ನು ಸಂರಕ್ಷಿಸಿ, ಉರಿಯವ ಭೂಮಿಯನ್ನು ತಂಪಾಗಿಸೋಣ ಬನ್ನಿ, ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ, ಪ್ಲಾಸ್ಟಿಕ್ ತ್ಯಜಿಸಿ ಮಾಲಿನ್ಯ ತಡೆಗಟ್ಟಿ, ಹಸಿರೇ ಉಸಿರು-ಜಲವೇ ಜೀವಜಲ, ಕುಡಿಯಿರಿ ಶುದ್ಧಜಲ ಉಳಿಸಿರಿ. ಅಂತರ್ಜಲ, ಜೀವ ಸಂಕುಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮನೆಗೊಂದು ಮರ ಊರಿಗೊಂದು ವನ, ಸ್ವಚ್ಛ ಗ್ರಾಮ ಆರೋಗ್ಯಧಾಮ, ಜೈವಿಕ ಇಂಧನ ಭವಿಷ್ಯದ ಇಂಧನ, ಬೈಸಿಕಲ್ ಬಳಸಿ ಇಂಧನ ಉಳಿಸಿ, ಬೈಸಿಕಲ್ ಬಳಸಿ ಪರಿಸರ ಸಂರಕ್ಷಿಸಿ ಎಂಬ ಘೋಷ ವಾಕ್ಯಗಳು ಮೊಳಗಿದವು. ಸಭಾ ಕಾರ್ಯಕ್ರಮದ ಮೊದಲು ಅರಣ್ಯ ಭವನದ ಆವರಣದಲ್ಲಿ ಗಿಡ ನೆಡಲಾಯಿತು.

No comments
Post a Comment