ಮಾಲೇಗಾಂವ್ ಸ್ಫೋಟದ ಸಂತ್ರಸ್ಥನ ತಂದೆಯಿಂದ ಸಾಧ್ವಿ ವಿರುದ್ಧ ದೂರು

No comments

ನವದೆಹಲಿ, ಏಪ್ರಿಲ್ 18: ಮಧ್ಯಪ್ರದೇಶದ ಭೋಪಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಅವರ ವಿರುದ್ಧ ಮಾಲೇಗಾಂವ್ ಸ್ಫೋಟದ ಸಂತ್ರಸ್ಥರೊಬ್ಬರ ತಂದೆ ದೂರು ನೀಡಿದ್ದಾರೆ.
"ಆರೋಗ್ಯದ ಸಮಸ್ಯೆ ಎಂದು ರಾಷ್ಟ್ರೀಯ ತನಿಖಾ ದಳದ ಕೋರ್ಟ್ ನಿಂದ ಜಾಮೀನು ಪಡೆದ ಪ್ರಜ್ಞಾ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಆರೋಗ್ಯ ಸರಿಯಾಗಿರುತ್ತದೆಯೇ?" ಎಂದು ಅವರು ಪ್ರಶ್ನಿಸಿದ್ದಾರೆ.
2008 ರ ಮಾಲೇಗಾಂವ್ ಸ್ಫೋಟದ ಆರೋಪಿಯಾಗಿ ಬಂಧನಕ್ಕೊಳಗಾಗಿದ್ದ ಸಾಧ್ವಿ ಅವರನ್ನು ಇತ್ತೀಚೆಗಷ್ಟೇ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಆರೋಪ ಮುಕ್ತಗೊಳಿಸಿತ್ತು. ಬುಧವಾರ ಬೆಳಗ್ಗೆಯಷ್ಟೇ ಅಧಿಕೃತವಾಗಿ ಬಿಜೆಪಿ ಸೇರಿದ ಪ್ರಜ್ಞಾ ಸಿಂಗ್ ಅವರು, ದಿಗ್ವಿಜಯ್ ಸಿಂಗ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಎದುರಿಸಲಿದ್ದಾರೆ.
ಮಧ್ಯಪ್ರದೇಶದಲ್ಲಿ ಒಟ್ಟು ಏಪ್ರಿಲ್ 29 ರಿಂದ ಮೇ 19 ರವರೆಗೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೂರಬೀಳಲಿದೆ.

No comments

Post a Comment