ಕೊಡಗು ಪೊಲೀಸರ ಭರ್ಜರಿ ಬೇಟೆ : ಕುಟ್ಟ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿದ ಗ್ಯಾಂಗ್ ಅಂದರ್
ಮಡಿಕೇರಿ ಏ.27 :
ಕೊಡಗು, ಕೇರಳ ಗಡಿಯ ಕುಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ ಆರು ಮಂದಿಯ ತಂಡವನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ- ಇರ್ಪು ಜಂಕ್ಷನ್ನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಾಹನ ಸಹಿತ ಕಡವೆ ಮಾಂಸ, ಬೇಟೆಗೆ ಬಳಸಿದ ಆಯುಧಗಳು ಮತ್ತು ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದರು.
ಪೊನ್ನಂಪೇಟೆಯ ಮಾಪಿಳ್ಳೆ ತೋಡು ನಿವಾಸಿಗಳಾದ ಕೆ.ಬಿ.ಸಿದ್ದಿಕ್, ಎಂ.ಹೆಚ್.ಶಮೀರ್, ಎ.ಯು.ಸಮೀರ್, ನಾಪೋಕ್ಲುವಿನ ಕುಂಜಿಲ ಗ್ರಾಮದ ಕೆ.ಇ.ಇಸ್ಮಾಯಿಲ್, ಕೆ.ಎ.ಯೂಸಫ್ ಹಾಗೂ ಕೆ.ಎ.ಮೊಹಮ್ಮದ್ ಬಂಧಿತ ಆರೋಪಿಗಳು.
ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂಟಿ ನಳಿಕೆಯ ಒಂದು ಬಂದೂಕು, ಇನ್ನಿತರ ಆಯುಧಗಳು, ಸುಮಾರು ೧೫೦ ಕೆ.ಜಿ. ಕಡವೆ ಮಾಂಸ, ಮಾರುತಿ ಸೆಲೋರಿಯಾ ಕಾರು ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್ಪೆಕ್ಟರ್ ಕೆ.ನಾಗೇಶ್, ಸಿಬ್ಬಂದಿಗಳಾದ ಕೆ.ಎಸ್.ಅನಿಲ್ಕುಮಾರ್, ಬಿ.ಎಲ್.ಯೋಗೇಶ್ ಕುಮಾರ್, ಕೆ.ಆರ್.ವಸಂತ, ಎಂ.ಎಂ.ನಿರಂಜನ್ ಹಾಗೂ ಚಾಲಕ ಕೆ.ಎಸ್.ಶಶಿಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ತಂಡಕ್ಕೆ ವರಿಷ್ಠಾಧಿಕಾರಿಗಳು ಇದೇ ಸಂದರ್ಭ ೧೦ ಸಾವಿರ ರೂ. ನಗದು ಬಹುಮಾನ ಘೋಷಿಸಿದರು
ಮಡಿಕೇರಿ ಏ.27 :
ಕೊಡಗು, ಕೇರಳ ಗಡಿಯ ಕುಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ ಆರು ಮಂದಿಯ ತಂಡವನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ- ಇರ್ಪು ಜಂಕ್ಷನ್ನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಾಹನ ಸಹಿತ ಕಡವೆ ಮಾಂಸ, ಬೇಟೆಗೆ ಬಳಸಿದ ಆಯುಧಗಳು ಮತ್ತು ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದರು.
ಪೊನ್ನಂಪೇಟೆಯ ಮಾಪಿಳ್ಳೆ ತೋಡು ನಿವಾಸಿಗಳಾದ ಕೆ.ಬಿ.ಸಿದ್ದಿಕ್, ಎಂ.ಹೆಚ್.ಶಮೀರ್, ಎ.ಯು.ಸಮೀರ್, ನಾಪೋಕ್ಲುವಿನ ಕುಂಜಿಲ ಗ್ರಾಮದ ಕೆ.ಇ.ಇಸ್ಮಾಯಿಲ್, ಕೆ.ಎ.ಯೂಸಫ್ ಹಾಗೂ ಕೆ.ಎ.ಮೊಹಮ್ಮದ್ ಬಂಧಿತ ಆರೋಪಿಗಳು.
ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂಟಿ ನಳಿಕೆಯ ಒಂದು ಬಂದೂಕು, ಇನ್ನಿತರ ಆಯುಧಗಳು, ಸುಮಾರು ೧೫೦ ಕೆ.ಜಿ. ಕಡವೆ ಮಾಂಸ, ಮಾರುತಿ ಸೆಲೋರಿಯಾ ಕಾರು ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್ಪೆಕ್ಟರ್ ಕೆ.ನಾಗೇಶ್, ಸಿಬ್ಬಂದಿಗಳಾದ ಕೆ.ಎಸ್.ಅನಿಲ್ಕುಮಾರ್, ಬಿ.ಎಲ್.ಯೋಗೇಶ್ ಕುಮಾರ್, ಕೆ.ಆರ್.ವಸಂತ, ಎಂ.ಎಂ.ನಿರಂಜನ್ ಹಾಗೂ ಚಾಲಕ ಕೆ.ಎಸ್.ಶಶಿಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ತಂಡಕ್ಕೆ ವರಿಷ್ಠಾಧಿಕಾರಿಗಳು ಇದೇ ಸಂದರ್ಭ ೧೦ ಸಾವಿರ ರೂ. ನಗದು ಬಹುಮಾನ ಘೋಷಿಸಿದರು

No comments
Post a Comment