ಸಂವಿಧಾನ ಬದಲಾಯಿಸಿದರೆ ರಕ್ತಪಾತ, ನಾನೇ ಅದರ ನೇತೃತ್ವ ವಹಿಸುವೆ: ಸಿದ್ದರಾಮಯ್ಯ

No comments

ಬಾಗಲಕೋಟೆ: 'ಸಂವಿಧಾನ ಬದಲಾಯಿಸಲೆಂದೇ ನಾವು ಬಂದಿದ್ದೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ದೇಶದ ಧರ್ಮ ಶಾಸ್ತ್ರವಾದ ಸಂವಿಧಾನ ಬದಲಾಯಿಸಿದರೆ ರಕ್ತಪಾತ ಉಂಟಾಗಲಿದೆ. ಅದರ ಮುಂದಾಳತ್ವ ನಾನೇ ವಹಿಸುವೆ' ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.
ರಬಕವಿ ಬನಹಟ್ಟಿಯಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಪರ ಪ್ರಚಾರ ನಡೆಸಿದ ನಡೆಸಿದ ಅವರು, 'ದೇಶದ ಪ್ರಧಾನಿಗಳಲ್ಲಿಯೇ ಅತಿ ಹೆಚ್ಚು ಸುಳ್ಳು ಹೇಳಿದ ಪ್ರಧಾನಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನರೇಂದ್ರ ಮೋದಿ ಮಹಾನ್ ಸುಳ್ಳುಗಾರ' ಎಂದು ಆಕ್ರೋಶ ವ್ಯಕ್ತಪಡಿಸಿದರು.

No comments

Post a Comment