ಹೊಸದಿಲ್ಲಿ: ಪೂರ್ವ ದಿಲ್ಲಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ವಿರುದ್ಧ ಆಮ್ ಆದ್ಮಿ ಪಕ್ಷ ಶುಕ್ರವಾರ ದೂರು ದಾಖಲಿಸಿದೆ.''ಗಂಭೀರ್ ಅವರು ಎರಡು ವೋಟರ್ ಐಡಿಗಳನ್ನು ಹೊಂದಿದ್ದು, ಇದು ಅಪರಾಧವಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸ್ಪರ್ಧೆಯಿಂದ ಅನರ್ಹಗೊಳಿಸಬೇಕು,'' ಎಂದು ಪೂರ್ವ ದಿಲ್ಲಿ ಕ್ಷೇತ್ರದ ಆಪ್ ಅಭ್ಯರ್ಥಿ ಅತೀಶಿ ಆಗ್ರಹಿಸಿದ್ದಾರೆ. ಈ ಕುರಿತು ದಿಲ್ಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ಆಪ್ ದೂರು ದಾಖಲಿಸಿದೆ.ಇತ್ತೀಚೆಗಷ್ಟೆ ಬಿಜೆಪಿ ಸೇರ್ಪಡೆಯಾದ ಗೌತಮ್ ಗಂಭೀರ್ ಅವರನ್ನು ಪೂರ್ವ ದಿಲ್ಲಿ ಕ್ಷೇತ್ರದ ಅಭ್ಯರ್ಥಿಯಾಗಿ ಕೇಸರಿ ಪಾಳಯ ಕಣಕ್ಕಿಳಿಸಿದೆ. ಒಟ್ಟು ಏಳು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ದಿಲ್ಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ.

No comments
Post a Comment