ಶ್ರೀಲಂಕಗೆ ಅನಗತ್ಯ ಪ್ರವಾಸ ಕೈಗೊಳ್ಳಬೇಡಿ : ಕೇಂದ್ರ ಸರಕಾರ

No comments


ಹೊಸದಿಲ್ಲಿ: ಶ್ರೀಲಂಕಾಗೆ ಅನಗತ್ಯ ಪ್ರವಾಸ ಕೈಗೊಳ್ಳದಂತೆ ಭಾರತ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ.
ಈಸ್ಟರ್ ಭಾನುವಾರದಂದು 250ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಸರಣಿ ಬಾಂಬ್ ಸ್ಫೋಟಗಳ ಹಿನ್ನೆಲೆಯಲ್ಲಿ ಉದ್ಭವಿಸಿದ ಭದ್ರತಾ ಬೆದರಿಕೆಗಳ ಕಾರಣಕ್ಕೆ ಕೇಂದ್ರ ಸರಕಾರ ಈ ಸಲಹೆ ಜಾರಿ ಮಾಡಿದೆ.
ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ 'ಪ್ರವಾಸ ಸಲಹೆ'ಯಲ್ಲಿ, ತುರ್ತು ಪ್ರವಾಸ ಕೈಗೊಳ್ಳಲೇಬೇಕಾದ ಸಂದರ್ಭಗಳಲ್ಲಿ ಕೊಲಂಬೋ, ಕ್ಯಾಂಡಿ, ಹಂಬಂಟೋಟಾ ಮತ್ತು ಜಾಫ್ನಾದಲ್ಲಿರುವ ಭಾತೀಯ ಹೈಕಮಿಷನ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದೆ.

No comments

Post a Comment