ಪ್ರಕೃತಿ ವಿಕೋಪ ಎದುರಿಸಲು ತಯಾರಿ ಅಗತ್ಯ:ಡಾ.ಜೆ ಆರ್ ಪರಮೇಶ್

No comments

ಪ್ರಕೃತಿ ವಿಕೋಪ ಎದುರಿಸಲು ತಯಾರಿ ಅಗತ್ಯ: ಡಾ.ಜೆ.ಆರ್.ಪರಮೇಶ್
ಮಡಿಕೇರಿ ಮೇ,09(ಕರ್ನಾಟಕ ವಾರ್ತೆ):-ಜಿಲ್ಲಾಡಳಿತ ಹಾಗೂ ವಿಕೋಪ ನಿರ್ವಹಣಾ ಕೇಂದ್ರ, ಆಡಳಿತ ತರಬೇತಿ ಸಂಸ್ಥೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ, ಪರಿಷ್ಕರಣೆ ಹಾಗೂ ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧ್ದತೆ ಹಾಗೂ ಸ್ಪಂದನೆ ಯೋಜನೆ ಬಗ್ಗೆ ಎರಡು ದಿನದ ತರಬೇತಿ ಉಪನ್ಯಾಸ ಕಾರ್ಯಾಗಾರವು ನಡೆಯಿತು. 
ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕರಾದ ಡಾ.ಜೆ.ಆರ್.ಪರಮೇಶ್ ಅವರು ಮಾತನಾಡಿ ಕಳೆದ ಬಾರಿ ಕೊಡಗು ತೀವ್ರ ಅತೀವೃಷ್ಟಿಯಿಂದಾಗಿ ಹಲವು ಹಾನಿ ಸಂಭವಿಸಿದ್ದು, ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಬೇಕಾಗಿದೆ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ನಿಯೋಜಿಸುವ ಮೂಲಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸುವುದು ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ವಿಪತ್ತು ತಡೆಗಟ್ಟುವಿಕೆ, ವಿಪತ್ತಿನ ಸಂದರ್ಭದಲ್ಲಿ ಸೂಕ್ತ ಸ್ಪಂದನೆ ಹಾಗೂ ಪುನರ್ವಸತಿ ಕಲ್ಪಿಸುವಲ್ಲಿ ಯೋಜನೆಯು ಹೇಗೆ ಉಪಯುಕ್ತವಾಗುತ್ತದೆ, ಮಾಹಿತಿಗಳನ್ನು ಹೇಗೆ ಕ್ರೋಢಿಕರಿಸಬೇಕು, ವಿಪತ್ತು ಯೋಜನೆ ಸಿದ್ಧ್ದಪಡಿಸುವ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಪಾಯಗಳ ಬಗ್ಗೆ ಗುರುತಿಸಿಕೊಂಡು ವಿಪತ್ತಿನ ಸಂದರ್ಭದಲ್ಲಿ ಸೂಕ್ತ ಸ್ಪಂದನೆ ಹಾಗೂ ಪುನರ್ವಸತಿ ಯೋಜನೆ ರೂಪಿಸಬೇಕು ಎಂದರು. 
ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರದವರು ವಿಪತ್ತು ನಿರ್ವಹಣಾ ಯೋಜನೆಗೆ ಸಿದ್ಧ್ದಪಡಿಸಿರುವ ಮಾರ್ಗದರ್ಶಿ ಆಧಾರದ ಮೇಲೆ ಸೂಕ್ತ ನಮೂನೆಗಳನ್ನು ಕಾರ್ಯಾಗಾರದಲ್ಲಿ ಪರಿಚಯಿಸಿದರು. ಜಿಲ್ಲೆಯಲ್ಲಿ ತುರ್ತು ನಿರ್ವಹಣಾ ಕೇಂದ್ರಗಳನ್ನು ದಿನದ 24 ಗಂಟೆಗಳು ಕಾರ್ಯನಿರ್ವಹಿಸುವಂತೆ ಮಾಡಬೇಕು.

No comments

Post a Comment