ರಾಜ್ಯ ಸರಕಾರಿ ನೌಕರರಿಗೆ ಭತ್ಯೆ ಹೆಚ್ಚಳ

No comments

ಬೆಂಗಳೂರು, ಮೇ 03: ಲೋಕಸಭೆ ಚುನಾವಣೆ 2019ರ ಸಂದರ್ಭದಲ್ಲಿ ಸುಮಾರು 9 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಶುಭ ಸುದ್ದಿ ಸಿಕ್ಕ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕರ್ನಾಟಕದ ರಾಜ್ಯಪಾಲರ ಆದೇಶ ಅನುಸಾರವಾಗಿ ಅವರ ಹೆಸರಿನಲ್ಲಿ ಸರ್ಕಾರದ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಬಿಎಸ್ ಸುವರ್ಣ ಅವರ ಸಹಿಯೊಂದಿಗೆ ಆದೇಶ ಹೊರಡಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಪರಿಷ್ಕರಣೆಯಾಗದ ಪ್ರಭಾರ ಭತ್ಯೆಯನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರ ಆದೇಶ(ಸಂಖ್ಯೆ : ಎಫ್ ಡಿ 03, ಎಸ್‌ಆರ್ ಎಸ್ 2012) ಹೊರಡಿಸಿದೆ. ಕನಿಷ್ಠ ಹಂತದಲ್ಲಿ ಮೊದಲ ಮೂರು ತಿಂಗಳವರೆಗೆ ಶೇಕಡ 7.5 ಹಾಗೂ ನಂತರದ ಅವಧಿಗೆ ಶೇಕಡ 15ರ ದರದಲ್ಲಿ ಭತ್ಯೆಯನ್ನು ನಿಗದಿಪಡಿಸಲಾಗಿದೆ.

No comments

Post a Comment