ಅನ್ವಾರುಲ್ ಹುದಾ ವಿದ್ಯಾಸಂಸ್ಥೆಯಲ್ಲಿ ಸಂಭ್ರಮದ ಈದುಲ್ ಫಿತರ್: ಪರಿಸರ ದಿನ

No comments

ವಿರಾಜಪೇಟೆ : ಕೊಡಗು ಜಿಲ್ಲೆಯ ಪ್ರಪ್ರಥಮ ಸಮನ್ವಯ ವಿದ್ಯಾ ಕೇಂದ್ರ ಅನ್ವಾರುಲ್ ಹುದಾ ವಿರಾಜಪೇಟೆಯಲ್ಲಿ ಸ್ನೇಹ, ಸಹನೆ, ಸಂತೋಷದ ಈದುಲ್ ಫಿತ್ವ್‌ರ್ ಹಬ್ಬದ ಆಚರಣೆಯೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುದರ್ರಿಸರಾದ ಅಬ್ದುರ್ರಹ್ಮಾನ್ ಅಹ್ಸನಿ ಉಸ್ತಾದ್ ಈದುಲ್ ಫಿತ್ವ್‌ರ್ ವಿಶೇಷ ಪ್ರಾರ್ಥನೆಗೆ ನೇತೃತ್ವ ವಹಿಸಿದ್ದರು. ವಿರಾಜಪೇಟೆಯ ಅರ್ಜಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ಎಸ್ ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಲಿಯಾಕತ್ ಅಲಿ ಹಾಗೂ ಸತ್ತಾರ್ ಚೇರಂಬಾಣೆ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

No comments

Post a Comment