ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ

No comments

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕನ್ನಡಕ್ಕೆ 6ನೇ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟಿದ್ದ ಗಿರೀಶ್ ಕಾರ್ನಾಡ್ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಯವದನ, ಯಯಾತಿ ಸೇರಿದಂತೆ ಹಲವಾರು ನಾಟಕಗಳನ್ನು ಅವರು ರಚಿಸಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ.

No comments

Post a Comment