ಜನ ಸಂಪರ್ಕ ಸಭೆ

No comments

 ಮಡಿಕೇರಿ -ಗೋಣಿಕೊಪ್ಪ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಜೂನ್, 29 ರಂದು ಬೆಳಗ್ಗೆ 10.30 ಗಂಟೆಯಿಂದ 12 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಜೂನ್, 29 ರಂದು ಮಧ್ಯಾಹ್ನ 2.30 ಗಂಟೆಯಿಂದ 4 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ವಿರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ ಅವರು ತಿಳಿಸಿದ್ದಾರೆ.

No comments

Post a Comment